Monday, October 18, 2010

ವಂಡರ್-ಕಣಯ್ಯಾ...ವಂಡರ್ರು...!!!

.

ವಂಡರ್-ಕಣಯ್ಯಾ...ವಂಡರ್ರು...!!!
ಮಗ ಹೇಳ್ದ...”ಅಲ್ಲಪ್ಪ ವೆಂಡರ್ ಕಣ್ಣು...!! “



ನಾನಂದೆ “ಹೌದಾ... ??”


“ಹೌದು ವೆಂಡರ್ ಅಂದ್ರೆ ಮಾರಾಟಗಾರ ಅಂತಲ್ಲವಾ..?? ಹಂಗಂದ್ರೆ...??!!”


ಅದೇ ಕಣಯ್ಯ ನಮ್ಮ ಮನೆಗೆ ಪೇಪರ್ ಹಾಕೋ ಶಿವು “ಏನೋ ಬರ್ದಿದ್ದೀನಿ..ಒಂದು ಬುಕ್ಕು....ಓದಿ ಸಾ...ಅದನ್ನೇಯ್ಯಾ ಮೊನ್ನೆ ಬಿಡುಗಡೆ ಮಾಡ್ಸಿದ್ದು..ನಿಮ್ಮನ್ನ ಇನ್ವೈಟ್ ಮಾಡಿದ್ದು...” ಅಂತ ಹೇಳಿದ್ದನಲ್ಲಾ...ಆ ಪುಸ್ತಕಾನೇ...ಹೂಂ ಮತ್ತೆ...


ನಾನು ಯೋಚನೆಮಾಡತೊಡಗಿದೆ......


ಅಲೆ ಇವನಾ..ಅಲ್ಲ ಕಣ್ ಕಣ್ ಬಿಟ್ಕೊಂಡ್ ತಿಂಗಳಾ ತಿಂಗಳಾ ಪೇಪರ್ ದುಡ್ಗೆ ಮನೆ ಹತ್ರ ಬರ್ತಿದ್ದೋನಿಗೆ,,,ಫೋಟೋಗ್ರಫಿ ಪ್ರಶಸ್ತಿ ಬಂದೈತೆ ಅಂದಾಗ .”ಏಯ್..ಏನೋ ಬಿಡು ಯಾರೂ ಇರ್ಲಿಲ್ಲವೇನೋ ಒಳ್ಲೆ ಫೋಟೋಗ್ರಾಫರ್ಸು ಕಾಂಪಿಟೆಶನಲ್ಲಿ” ಅಂದ್ಕೊಂಡೆ...ಆವೊತ್ತು...ಮತ್ತೆ ಅದೇ ಶಿವು..ಇಂಗ್ಲೀಷೋರ್ನೂ ಮೆಚ್ಚಿಸೋ ಹಾಗೆ ಫೋಟೋ ತೆಗ್ದು ಮತ್ತೆ ತಗೊಂಡಾಗ ಪ್ರಶಸ್ತೀನಾ..


ಊಂ...ಏನೋ ಐತಪ್ಪ ಈ ಹುಡ್ಗನ ಹತ್ರ ಪ್ರತಿಭೆ ಥರದ್ದು ಅನ್ಸಿತ್ತು...ಮತ್ತೆ ಮತ್ತೆ ಸುಮಾರು ಪ್ರಶಸ್ತಿ ಬಂದಿದ್ದು ..ನೋಡಿ ಹೌದಪ್ಪ ..!! ಒಪ್ಕೋ ಬೇಕಾದ್ದೇ ಅನ್ನಿಸ್ತು....


ಅದೆಲ್ಲ ಸರಿ ಮೊನ್ನೆ ಮೊನ್ನೆ ಬರಿಯೋಕೆ ಶುರು ಮಾಡಿದ್ದಿನಿ ಅಂದಂಗಿತ್ತು...ಮತ್ತೆ ನೋಡಿದ್ರೆ......... ???


ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್[ರಿ], ಧಾರವಾಡ ಇವರು ನೀಡುವ ಬೇಂದ್ರೆ ಗ್ರಂಥ ಬಹುಮಾನ-೨೦೧೦, ಕ್ಕೆ ಕೆ.ಶಿವು ರವರ “ವೆಂಡರ್ ಕಣ್ಣು” ಆಯ್ಕೆಯಾಗಿದೆ


ಅಂತ ಸುದ್ದಿ..ಓದಿ....ಓ...!!!! ತಕಳಪ್ಪಾ...ಇಲ್ಲೂ ಬಾರಿಸ್ಬಿಟ್ಟ ಸಿಕ್ಸರಾ....!!! ಅನ್ಸಿ...ಫೋನಾಯಿಸಿಯೇ ಬಿಟ್ಟೆ...


ನಮಸ್ಕಾರ ಶಿವು (ನನಗೇ ಗೊತ್ತಿಲ್ಲದೇ..ಸ್ವಲ್ಪ ಗಾಂಭೀರ್ಯ ಮತ್ತೆ ಗೌರವ ತುಂಬಿತ್ತು ನನ್ನ ದನಿಯಲ್ಲಿ..!!)..ಅಭಿನಂದನೆಗಳು..ಕಣಪ್ಪಾ.....


ನಮಸ್ಕಾರ ಸಾ...(ಅದೇ ಮುಗ್ಧ ಮುಖ ಕಣ್ಣಮುಂದೆ ಬಂದಿತ್ತು) ಸೈಂಟಿಸ್ಟ್ ರಾಮಣ್ಣನೋರು ಅಲ್ವಾ.. ಎಲ್ಲಾ ನಿಮ್ಮ ಆಶೀರ್ವಾದ ಸಾ...ಏನೋ,, ಬರ್ದೆ..ಅವರಿಗೆ ಇಷ್ಟ ಆಯ್ತು...ಎಲ್ಲಾ ಹಿರಿಯರ ಆಶೀರ್ವಾದ...... ತುಂಬಾ ಥ್ಯಾಂಕ್ಸು ಸಾ ಫೋನ್ ಮಾಡಿದ್ದಕ್ಕೆ ...ನಿಮ್ಮಂತೋರ ಆಶೀರ್ವಾದ ಹೀಗೇ ನಮ್ಮ ಮೇಲೆ ಇರ್ಲಿ ಸಾ...


ಹೌದು..ಸಂಶಯವೇ ಬೇಡ...ಅದೇ..ಶಿವು..ಹಾಗೇ ಇದ್ದಾನೆ...ಅದೇ ವಿನಯ..ಮುಗ್ಧತೆ...ಅನ್ನಿಸಿತು ನನಗೆ ..ಇಲ್ಲಾಂದ್ರೆ..ಒಂದು ಮಾಮೂಲಿ ಬಹುಮಾನ ಬಂದ್ರೆ ಸಾಕು ಈಗಿನ ಯುವಕರ ತಲೆ ಒಂದು ಕಡೆ ನಿಲ್ಲೊಲ್ಲ....


ಆಯ್ತಪ್ಪ..ಶುಭವಾಗಲಿ...ನಿನ್ನ ಕೃಷಿ ಹೀಗೇ ಫಲ ನಿಡ್ತಾ ಇರ್ಲಿ....


ಫೋನಿಟ್ಟೆ.....ಟೇಬಲ್ ಮೇಲೆ ಇಟ್ಟಿದ್ದ ಶಿವು ನ “ವೆಂಡರ್ ಕಣ್ಣು” ಕೈಗೆತ್ತಿಕೊಂಡೆ......