Saturday, April 2, 2011

ಭಾರತಕ್ಕೆ ವಿಶ್ವಕಪ್ ಕ್ರಿಕೆಟ್ ಕಿರೀಟ

ಭಾರತಕ್ಕೆ ವಿಶ್ವಕಪ್ ಕ್ರಿಕೆಟ್ ಕಿರೀಟ

ಕಪಿಲವಾಹಿನಿಯ ರಭಸ ಅಂದು
ವಿಶ್ವ ಕ್ರಿಕೆಟ್ ಮಕುಟವ ತಂದು
ಇಪ್ಪತ್ತೆಂಟು ವರ್ಷದ ನಂತರ
ದೋಣಿಯ ನಾಯಕ ನಾವಿಕನಾಗಿ
ಭರತದ ಹರುಷ ಮರುಮಕುಟವು ಇಂದು

ಜ಼ಹೀರ ಮುನಾಫರ ಪ್ರಾರಂಭಿಕ ಬಿಗಿತ
ಕರಾರುವಾಕ್ ಭಜ್ಜಿ ಯುವಿ ಎಸೆತ
ಮಾಡಲು ಅಧಿಕ ಲಂಕನ್ನರ ತುಡಿತ
ತಡೆದರು ಫೀಲ್ಡರುಗಳು ಪ್ರತಿ ಹೊಡೆತ
ಏಕಮಾತ್ರ ಜಯವರ್ಧನೆ ಸೆಂಚುರಿ ಜಿಗಿತ

ಇನ್ನೂರ ಎಪ್ಪತ್ತೈದರ ಗುರಿ ಸವಾಲು
ಸೆಹ್ವಾಗ್ ಸಚಿನ್ ಆಗದೆ ರನ್ ಮಾಡಲು
ವಿರಾಟ ತನ್ನಾಟ ಗಂಭೀರನ ಕಮಾಲು
ಸಾಗತೊಡಗಿತು ದೋಣಿ ತೀರ ಸೇರಲು
ಮೆಲ್ಲ ಮೆಲ್ಲನೆ ತನ್ನಂತಿಮ ಗುರಿ ತಲುಪಲು

ವಿರಾಟನಾಟದ ನಂತರ ನಾಯಕನಾಗಮನ
ಶತಕದ ಬಳಿ ಎಡವಿತು ಗಂಭೀರನ ತನನ
ತನ್ನೆಲ್ಲ ಶಕ್ತಿಯ ಮೆರೆದಿದ್ದ ಯುವಿಯಾಗಮನ
ಹೆಜ್ಜೆ ಹೆಜ್ಜೆಗೂ ಪ್ರತಿ ರನ್ನಿಗೂ ಎಂಥ ಸಂಚಲನ
ಸಂಗಕಾರ ತನ್ನವರೊಂದಿಗೆ ನಡೆಸಲು ಚಿಂತನ

೪೬ ರಲ್ಲಿ ಮಾಲಿಂಗ ಕೊಟ್ಟದ್ದು ಕೇವಲ ೩ ರನ್ನು
ಮುರಳಿಗಲ್ಲ ೪೭ ಸಿಕ್ತು ನಮ್ಮವರಿಗೆ ಕುಲಶೇಖರ ಬನ್ನು
ಯುವಿ ಧೋನಿ ಜಡಿದರು ಒಟ್ಟು ೧೧ ಅಮೂಲ್ಯ ರನ್ನು
ಮಾಲಿಂಗನನ್ನೂ ಬಿಡಲಿಲ್ಲ ೪೮ ರಲ್ಲಿ ಮತ್ತೆ ೧೧ ರನ್ನು
ಬೇಕಿತ್ತು ೫ ಧೋನಿ ಬಾರಿಸಿದ ಸಿಕ್ಸು ಗಳಿಸಿತು ವಿಶ್ವಕಪ್ಪನ್ನು