Saturday, December 10, 2011

ಭಾವ ಕಲಕಿದ ಛಾಯಾಚಿತ್ತಾರ ಮತ್ತೊಂದು.....

Foto: Prakash Hegde

ಓಹ್..ನಿನ್ನ ನೋಡಿದರೆ...!!!

ಹಳ್ಳಿಯ ಕೆರೆ,
ಹುಲ್ಲಿನ ಹೊರೆ,
ಕೆರೆಸೇರು ತೊರೆ
ಎಲ್ಲಾ ನೆನಪಾಗುತ್ತೆ.
ಸ್ನೇಹಿತ ಅಮ್ಮನ ವ್ಯಥೆ
ಕೆರೆಹೊಕ್ಕ ಎಮ್ಮೆ ಕಥೆ
ಹೂಳೆತ್ತೋ ಕಂಬಾರ
ಮೀನಕದ್ದೋಡಿದ ಚೋರ
ಚಿತ್ರ ಹಾದು ಹೋಗುತ್ತೆ.

ಓಹ್ ನಿನ್ನ ನೋಡಿದರೆ....!!!
ಚೇರ್ಮನ್ನರ ಭೂಕಬಳಿಕೆ
ಮರೆಯಾದ ಕೃಷಿಗಳಿಕೆ
ಬತ್ತಿ ಮಾಯವಾದ ತೊರೆ
ಗುಳೇ ಹೊರಟ ರೈತ ನೆರೆ

ತಲೆ ಎತ್ತುವ ಮಹಲುಗಳು
ರೆಸಾರ್ಟ್ ರಾಜಕೀಯಗಳು
ಅಲ್ಲಿಯೇ ಕೂಲಿಯಾದ ರೈತಗಳು
ಎಲ್ಲಾ ಎಲ್ಲಾ ನೆನಪಾಗುತ್ತೆ...
ಕಣ್ಣೆವೆ ಹೀಗೇ ಅನಾಯಾಸ
ಒರಸಿಕೊಂಡರೂ ನಿಲ್ಲದೇ
ಮತ್ತೆ ಮತ್ತೆ ತೇವವಾಗುತ್ತೆ.